Skip to main content

Posts

Showing posts from January, 2022

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೇರ್ದಾಳ್ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಪರಶುರಾಮ ಮೇತ್ರಿ ಆಯ್ಕೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೇರ್ದಾಳ್ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಪರಶುರಾಮ ಮೇತ್ರಿ ಆಯ್ಕೆ ಎಸ್‍ಡಿಪಿಐ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಇಂದು ನಡೆದ ಪಕ್ಷದ ತೇರ್ದಾಳ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ನೂತನ ವಿಧಾನಸಭಾ ಕ್ಷೇತ್ರ ಸಮಿತಿಯ ಘೋಷಣೆ ಮಾಡಿದರು.  ಅಧ್ಯಕ್ಷರು : ಪರಶುರಾಮ್ ಮೇತ್ರಿ ಉಪಾಧ್ಯಕ್ಷರು: ಮುಬಾರಕ್ ಎಕ್ಸಾಂಬಿ ಕಾರ್ಯದರ್ಶಿ : ಉಮರ್ ಫಾರೂಕ್ ಖಾಲೆಖಾನ್ ಜೂತೆ ಕಾರ್ಯದರ್ಶಿ : ಯಾಸೀನ್ ಬೆಲೆಗೆರೆ ಖಜಾಂಚಿ : ಸಿರಾಜುದ್ದೀನ್ ಸದಸ್ಯರುಗಳಾಗಿ : ಜಯರಾಮ್ ಘಶ್ತಿ, ಮಹಾಲಿಂಗಪ್ಪ ಭಜಂತ್ರಿ, ಬೀಮ್ ಶಿ ಮಾವಿನಹಿಂಡಿ, ಹುಸೇನ್ ಉಕ್ಲಿ, ರಿಯಾಝ್ ನದಾಫ್, ಭಾಷಾ ಬಿಸ್ತಿ ಆಯ್ಕೆಯಾಗಿದ್ದಾರೆ.  ಸಮಿತಿ ಘೋಷಣೆ ಮಾಡಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ ಪಕ್ಷವು ಕಳೆದ ಹನ್ನೆರಡು ವರ್ಷಗಳಿಂದ ತಳ ಸಮುದಾಯಗಳಲ್ಲಿ ರಾಜಕೀಯ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದು ಸುಮಾರು 300 ರಷ್ಟು ಜನ ಪ್ರತಿನಿಧಿಗಳು ಚುನಾಯಿತರಾಗಿ ಜನರ ಪ್ರತಿನಿಧಿಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಸಂವಿಧಾನದ ಆಶಯಗಳನ್ನು ಅನುಷ್ಠಾನ ಮಾಡಲು ಯುವ ಜನಾಂಗ ಹೋರಾಟ ಮಾಡಬೇಕು. ರಾಜಕೀಯ ಲಾಭಕ್ಕಾಗಿ  ಜನರನ್ನು ಧರ್ಮ , ಜಾತಿ ಮತ್ತು ಭಾಷೆಯ ಹೆಸ...

ನರಗುಂದ ನಗರದಲ್ಲಿ ಕೊಲೆಯಾದ ಸಮೀರ್ ಮುಸ್ಲಿಂ ಯುವಕನ ಬರ್ಬರ ಹತ್ಯೆ ಮಾಡಿದ 4 ಆರೋಪಿಗಳ ಬಂಧನ

ನರಗುಂದ, ಜ.19: ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನರಗುಂದ ನಿವಾಸಿ ಸಮೀರ್ ಶಹಪುರ(19) ಎಂಬ ಯುವಕನನ್ನು ಕೊಲೆಗೈದು ಇನ್ನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಬಜರಂಗ ದಳದ ಮುಖಂಡ ಸಹಿತ ನಾಲ್ವರು ಕಾರ್ಯಕರ್ತರನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಬಜರಂಗದಳದ ಮುಖಂಡನಾದ ಸುಬೇದಾರ್ ಓಣಿಯ ಗುತ್ತಿಗೆದಾರ ಸಂಜು ಮಾರುತಿ ನಲವಡಿ, ಕಾರ್ಯಕರ್ತರಾದ ನರಗುಂದ ಪಟ್ಟಣದ ಸಿದ್ದನಬಾವಿ ಓಣಿ ನಿವಾಸಿ ಮಲ್ಲಿಕಾರ್ಜುನ ಅಲಿಯಾಸ್ ಗುಂಡ್ಯ ಮುತ್ತಪ್ಪ ಹಿರೇಮಠ, ಚನ್ನಬಸಪ್ಪ ಅಲಿಯಾಸ್ ಚನ್ನಪ್ಪ ಚಂದ್ರಶೇಖರ ಅಕ್ಕಿ ಹಾಗೂ ವಾಸವಿ ಕಲ್ಯಾಣ ಮಂಟಪ ಬಳಿ ನಿವಾಸಿ ಸಕ್ರಪ್ಪ ಹನುಮಂತಪ್ಪ ಕಾಕನೂರು ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ: ನರಗುಂದದಲ್ಲಿ ಹೊಟೇಲ್ ನಡೆಸುತ್ತಿದ್ದ ಸಮೀರ್ ಶಹಪುರ ಸೋಮವಾರ ರಾತ್ರಿ ತನ್ನ ಹೊಟೇಲ್ ಬಂದ್‌ ಮಾಡಿ ಸಮೀಪದಲ್ಲೇ ಸ್ಟುಡಿಯೋ ನಡೆಸುತ್ತಿದ್ದ ಗೆಳೆಯ ಶಂಶೀರ್‌ ಎಂಬವರ ಜೊತೆ ಬೈಕ್‌ನಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದ ವೇಳೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಮಲ್ಲಿಕಾರ್ಜುನ ಮತ್ತು 10-15 ಮಂದಿಯ ತಂಡ ಇವರ ಬೈಕನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆಸಿತೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಸಮೀರ್ ಮತ್ತು ಶಂಶೀರ್ ಅವರನ್ನು ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ...

ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು ಮತ್ತು ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ*

 ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು ಮತ್ತು ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ* ಗದಗ ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. ಜೀವನೋಪಾಯಕ್ಕಾಗಿ ಹೊಟೇಲ್ ನಡೆಸುತ್ತಿದ್ದ ಸಮೀರ್ ರಾತ್ರಿ ಕೆಲಸ ಮುಗಿಸಿ ತನ್ನ ಸ್ನೇಹಿತ ಸಂಶೀರ್ ನೊಂದಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಂಘಪರಿವಾರದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಗಂಭೀರ ದಾಳಿಯಿಂದಾಗಿ ಸಮೀರ್ ಮೃತಪಟ್ಟರೆ, ಆತನ ಸ್ನೇಹಿತ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೆಲ ದಿನಗಳ ಹಿಂದೆ ಆರೆಸ್ಸೆಸ್ ಕಾರ್ಯಕರ್ತರು ದುರುದ್ದೇಶಪೂರ್ವಕವಾಗಿ ಮುಸ್ಲಿಮ್ ಯುವಕನಿಗೆ ತಮ್ಮ ವಾಹನ ಢಿಕ್ಕಿ ಹೊಡೆಸಿದ ಬಳಿಕ ಸ್ಥಳದಲ್ಲಿ ಸಣ್ಣ ಮಟ್ಟದ ವಾಗ್ವಾದ ನಡೆದಿತ್ತು. ಆ ನಂತರ ಸಂಘಪರಿವಾರದ 40 ಮಂದಿ ದುಷ್ಕರ್ಮಿಗಳು ಗುಂಪುಕಟ್ಟಿಕೊಂಡು ಬಂದು ಮುಸ್ಲಿಮ್ ಮೊಹಲ್ಲಾಗೆ ನುಗ್ಗಿ ಬೆದರಿಕೆಯೊಡ್ಡಿದ್ದರು. ಈ ವೇಳೆ ಎರಡೂ ಗುಂಪುಗಳ ಮಧ್ಯೆ ಘರ್ಷಣೆಯೂ ನಡೆದಿತ್ತು. ಅದಾದ ನಂತರ ಸಂಘಪರಿವಾರವು ನಗರದಲ್ಲಿ ಸುಮಾರು 2 ಕಿ.ಮೀ. ವರೆಗೂ ಬೃಹತ್ ರಾಲಿ ನಡೆಸಿದ್ದು, ಇದರಲ್ಲಿ ರಸ್ತೆಯುದ್ದಕ್ಕ...

KALAAM EXPRESS NEWS ಅಂಜುಮನ್ ಎ ಇಸ್ಲಾಂ ಸಂಸ್ಥೆ ಬನಹಟ್ಟಿ ಇವರಿಂದ Waqf ಬೋರ್ಡ್ ಬಾಗಲಕೋಟ ಇಂಚಾರ್ಜ್ ಆಫೀಸರ್ ರಹಮತುಲ್ಲ ಪೆಂಡಾರಿ ಅವರಿಗೆ ಸನ್ಮಾನ :

Waqf ಬೋರ್ಡ್ ಬಾಗಲಕೋಟ್ ಇಂಚಾರ್ಜ್ ಆಫೀಸರ್ ರೆಹಮತ್ತುಲ್ಲಾ ಪೆಂಡಾರಿ ಇವರಿಗೆ ಅಂಜುಮನ್ ಎ ಇಸ್ಲಾಂ ಸಂಸ್ಥೆ ಯಿಂದ ಸನ್ಮಾನ ಮಾಡಿದರು .ತಮ್ಮ ಸ್ವ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ವೋಟ್ನಲ್ಲಿ ಸೇವೆ ಸಲ್ಲಿಸಿದರು ಸಾಕಷ್ಟು ಬಾಗಲಕೋಟ ಜಿಲ್ಲೆಯಲ್ಲಿ ಅವರು ಅಂಜುಮನ್ ಮಸೀದಿ , ದರ್ಗಾ , ಕಬ್ರಸ್ತನ್  , ಇನ್ನಿತರ ಕೆಲಸಗಳಿಗೆ ಸರ್ಕಾರದಿಂದ ಬಂದಂತಹ ಅನುದಾನ ಬಿಡುಗಡೆ ಮಾಡಿ ಜಿಲ್ಲೆಯ ಜನರಿಗೆ ಅನುಕೂಲಕರ ಸೇವೆ ಮಾಡಿದವರು . ರಹಮತ್ತುಲ್ಲಾ  ಪೆಂಡಾರಿ  ಅವರು ಬಾಗಲಕೋಟ್ ಜಿಲ್ಲೆಯಿಂದ ಬಡ್ತಿ ಪಡೆದು ಕೊಪ್ಪಳ ಜಿಲ್ಲೆಗೆ ವರ್ಗಾವಣೆಯಾಗಿದೆ ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಚಾರ್ಜ್ ಆಫೀಸರ್ ರಹ್ಮತುಲ್ಲಾ ಪೆಂಡಾರಿ  ಬಾಗಲಕೋಟ ಜಿಲ್ಲೆಯಾದ್ಯಂತ ಎಲ್ಲ ಅಧ್ಯಕ್ಷರು ಸದಸ್ಯರು ಎಲ್ಲರಿಂದ ಸೇವೆಗಳಿಗೆ ಸಹಕಾರದಿಂದ ನೋಡಿಕೊಂಡಿದ್ದಾರೆ ಮತ್ತು ಸರ್ಕಾರಿ ಸೇವೆ ಮಾಡಿದವರಿಗೆ ಇಷ್ಟೊಂದು ಗೌರವ ನನಗೆ ,  ನಾನು ನಿಮ್ಮೆಲ್ಲರ ಅಪಾರ ಕೃತಜ್ಞನಾಗಿರುತ್ತೇನೆ  ಎಂದು ಹೇಳಿದರು . ಇದೇ ಸಂದರ್ಭದಲ್ಲಿ ಮಾತನಾಡಿದ ಅಂಜುಮನ್ ಬನಹಟ್ಟಿ ಸಂಸ್ಥೆಯ ಅಧ್ಯಕ್ಷರಾದ ಅರುಣ್ ರಶೀದ್ ಸಾಂಗ್ಲಿಕರ್ ಅವರು ಅಂಜುಮನ್ ಸಂಸ್ಥೆಯ ಆಡಳಿತ ಮಂಡಳಿ ಬನಹಟ್ಟಿ ಯಾವಾಗ ಪುನರ್  ರಚನೆಯಾಯಿತು ಆವಾಗಿನಿಂದ ನಮ್ಮ ಬನಹಟ್ಟಿ ಅಂಜುಮನ್ ಸಂಸ್ಥೆಗೆ ಸಾಕಷ್ಟು ಸರಕಾರದಿಂದ ಅನುದಾನ ಕೊಡುವವಲ್ಲಿ ಸಹಾಯ ಪ್ರೋತ್ಸಾಹ ಸಂಸ್ಥೆಗೆ ನೀಡಿದ್ದಾರೆ. .ಮತ್...

KALAAM EXPRESS NEWS weekend curfew

ರಬಕವಿ ಬನಹಟ್ಟಿ ಅವಳಿ ನಗರಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಎರಡನೇ ವಾರ ಸಂಪೂರ್ಣ ವ್ಯಾಪಾರ ವಹಿವಾಟು ಸ್ಥಗಿತ , ಬಸ್-ಲಾರಿ ಆಟೋ  ಎಂದಿನಂತೆ ಸಂಚಾರ .    ರಬಕವಿ ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಅವಳಿ ನಗರಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ವೀಕೆಂಡ್ ಕರ್ಫ್ಯೂ ಪೊಲೀಸ್ ಇಲಾಖೆಯವರು ಸರ್ಕಾರ ಹೊರಡಿಸಿರುವ ಆದೇಶವನ್ನು ಪಾಲನೆ ಮಾಡಿಸುವವಲ್ಲಿ   ಸಂಪೂರ್ಣ ಯಶಸ್ವಿಯಾಗಿದ್ದಾರೆ .ರಬಕವಿ ಬನಹಟ್ಟಿ ರಾಂಪುರ ಹೊಸೂರ ಸಾರ್ವಜನಿಕರು ತಮ್ಮ ತಮ್ಮ  ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ತಮ್ಮ ಮನೆಯಲ್ಲಿ ಸರ್ಕಾರ ಆದೇಶ ಹೊರಡಿಸಿರುವ ವೀಕೆಂಡ್ ಕರ್ಫ್ಯೂ ಆದೇಶ ಪಾಲನೆ ಮಾಡಿದ್ದಾರೆ .    ಪೊಲೀಸ್ ಇಲಾಖೆಯವರು ವ್ಯಾಪಾರ ವಹಿವಾಟುಗಳು ಬಂದ್ ಮಾಡಿಸಿ ಜನಸಂಚಾರ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನ ಸಮೂಹ ಕೊಡದಂತೆ ಎಚ್ಚರಿಕೆ ವಹಿಸಿದ್ದರು . KALAAM EXPRESS NEWS  R BANHATTI

ಉತ್ತರ ಪ್ರದೇಶದ ಚುನಾವಣೆ ಸುದ್ದಿ ಕಲಾಂ ಎಕ್ಸ ಪ್ರೆಸ್ ನ್ಯೂಸ್ ನಲ್ಲಿ

ಉತ್ತರ ಪ್ರದೇಶ.. UPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌ ಕಾರ್ಮಿಕ ಸಚಿವ ರಾಜೀನಾಮೆ ಕೊಟ್ಟ ಬಳಿಕ ಈ ಹೇಳಿಕೆ ನೀಡಲಾಗಿದ್ದು, ಇದರ ಬೆನ್ನಲ್ಲೇ ಮೂವರು ಬಿಜೆಪಿ ಶಾಸಕರು ಪಕ್ಷ ತೊರೆದಿದ್ದಾರೆ  ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಕ್ಯಾಬಿನೆಟ್ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರಿದ ನಂತರ ಶರದ್‌ ಪವಾರ್‌ ಅವರ ಈ ಹೇಳಿಕೆ ಹೊರಬಿದ್ದಿದೆ. ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ! ಅವರ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಇತರ ಮೂವರು ಬಿಜೆಪಿ ಶಾಸಕರು ಮಂಗಳವಾರ ಪಕ್ಷ ತೊರೆದಿದ್ದಾರೆ. ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಕ್ಷ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಉತ್ತರ ಪ್ರದೇಶದ ಜನರು ಬದಲಾವಣೆಗಾಗಿ ಎದುರು ನೋಡುತ್ತಿದ್ದಾರೆ, ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ, ವಿಧಾನಸಭೆ ಚುನಾವಣೆಗೂ ಮುನ್ನ ಉತ್ತರ ಪ್ರದೇಶದಲ್ಲಿ ಕೋಮು ಧ್ರುವೀಕರಣ ಮಾಡಲಾಗುತ್ತಿದೆ, ಇದಕ್ಕೆ...

ಹಾಸನ್ ಜಿಲ್ಲಾಸುದ್ದಿ ಕಲಾಂ ಎಕ್ಸ ಪ್ರೆಸ್ ನಲ್ಲಿ

ಅರಸೀಕೆರೆ : ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ನಿಧನರಾಗಿರುವುದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಹೇಮಂತ್‌ ಕುಮಾರ್‌ ಹೇಳಿದರು .  ನಗರದ ಪಿ.ಪಿ. ವೃತ್ತದಲ್ಲಿ ಕರವೇ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು , ಕನ್ನಡ ಸಾಹಿತ್ಯ ಪರಿಷತ್ತ್ ಕನ್ನಡ ಅಭಿವೃದ್ಧಿ ಪ್ರಾದ್ದಿಕಾರ ಅಧ್ಯಕ್ಷರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಕನ್ನಡ ಕಟ್ಟು ಕೆಲಸಗಳನ್ನು ಮಾಡಿದ್ದರು . ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು .ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಸಕ್ರೀಯ ಸದಸ್ಯರಾಗಿ ಕರವೇ ಹಿತೈಷಿಗಳಾಗಿದರು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿ ಗೌರವಗಳು ಹಲವಾರು ಇವರ ಅಗಲಿಕೆ ಈ ನಾಡಿಗೆ ತುಂಬಲಗದ ನಷ್ಟವಾಗಿದೆ ಎಂದರು ನಗರಾಧ್ಯಕ್ಷ ಕಿರಣ್‌ಕುಮಾರ್‌ ಮಾತನಾಡಿ , ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವ ಮೂಲಕ ಕನ್ನಡ ವಿಮರ್ಶಾ ಕ್ಷೇತ್ರ , ನಾಟಕ ರಚನೆಯಲ್ಲಿ ಪ್ರಸಿದ್ಧರಾಗಿದ್ದರು ಚಂದ್ರಶೇಖರ ಪಾಟೀಲ್‌ರವರು , ಅವರು ರಚಿಸಿದ ನಾಟಕಗಳು ದೇಶ ಸೇರಿದಂತೆ...

ಬೆಳಗಾವಿ ಸುದ್ದಿ , Kalaam Express news

ಹೆಚ್ಚುವರಿ ಎಸ್ಪಿಯಾಗಿ ನಂದಗಾವಿ ಅಧಿಕಾರ ಸ್ವೀಕಾರ ಬೆಳಗಾವಿ ಹೆಚ್ಚುವರಿ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಯಾಗಿದ್ದ ಮಹಾನಿಂಗ ನಂದಗಾಂವಿ ಅವರು  ಬೆಳಗಾವಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಮಹಾನಿಂಗ ನಂದಗಾಂವಿ ಈ ಹಿಂದೆ ರಾಮದುರ್ಗ ಉಪವಿಭಾಗದ ಡಿವೈಎಸ್‌ಪಿ ಹಾಗೂ ಬೆಳಗಾವಿ ನಗರ ಪೊಲೀಸ್ ಕಮಿಷ್ನರೆಟನ್ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

KALAAM EXPRESS NEWS

ಪಂಚ ರಾಜ್ಯ ಚುನಾವಣೆ ಘೋಷಣೆ, ಉ. ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನ, ಮಾರ್ಚ್‌ 10ಕ್ಕೆ ಫಲಿತಾಂಶ ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೇ ಚುನಾವಣಾ ಆಯೋಗ ಶನಿವಾರ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಈ ಮೂಲಕ ಉತ್ತರ ಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.  ಶನಿವಾರ ಅಪರಾಹ್ನ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ಚುನಾವಣಾ ದಿನಾಂಕ ಘೋಷಣೆ ಮಾಡಿದರು.  ಎಲ್ಲಾ ರಾಜ್ಯಗಳಲ್ಲೂ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತಿದೆ ಎಂದು ಸುಶೀಲ್‌ ಚಂದ್ರ ಹೇಳಿದ್ದು, ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.  7 ಹಂತಗಳ ಚುನಾವಣೆ  ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ, ಮಣಿಪುರದಲ್ಲಿ 2 ಹಂತಗಳಲ್ಲಿ ಹಾಗೂ ಉತ್ತರಾಖಂಡ್‌, ಪಂಜಾಬ್‌ ಮತ್ತು ಗೋವಾದಲ್ಲಿ ತಲಾ ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ - ಉತ್ತರ ಪ್ರದೇಶ  ಮತದಾನ - ಫೆಬ್ರವರಿ 10  2ನೇ ಹಂತ - ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ್‌, ಗೋವಾ  ಮತದಾನ - ಫೆಬ್ರವರಿ 14  3ನೇ ಹಂತ - ಉತ್ತ...

kalaam

ಅರಸೀಕೆರೆ..  ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಪುಂಡರ ವಿರುದ್ಧ ಹಾಗೂ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರವಾಸಿ ಮಂದಿರದಿಂದ ಪಿ.ಪಿ ವೃತ್ತದವರೆಗೂ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಯಲ್ಲಿ ವಿವಿಧ ಪಕ್ಷಗಳಮುಖಂಡರು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ರಸ್ತೆ ತಡೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕುರುಬ ಸಂಘದ ಅಧ್ಯಕ್ಷ ಪಟೇಲ್ ಶಿವಪ್ಪ ಸಂಗೊಳ್ಳಿ ರಾಯಣ್ಣ ಯಾವುದೇ ಒಂದು  ಜಾತಿ ವರ್ಗಕ್ಕೆ ಸೀಮಿತವಲ್ಲ ಇಡೀ ರಾಷ್ಟ್ರಕ್ಕೆ ಸೇನಾನಿಯಾದ ವ್ಯಕ್ತಿ ಅಂಥವರಿಗೆ ಅಪಮಾನ ಮಾಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ವಿಕಾಸ ಸೌಧ ಮುಂಭಾಗದಲ್ಲಿ ರಾಯಣ್ಣವರ ಪ್ರತಿಮೆಯನ್ನು ಸ್ಥಾಪಿಸಬೇಕು  ಅದರ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಹೇಳಿದರು         ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್ ರವರು ಒಂದು ಗಂಟೆಯಿಂದ ಸಂಚಾರ ಸ್ಥಗಿತವಾದ ಸ್ಥಳಕ್ಕೆ ಆಗಮಿಸಿ ಟ್ರಾಫಿಕ್ ಕ್ಲಿಯರ್ ಮಾಡಿ ವಾಹನಗಳಿಗೆ ಓಡಾಡಲು ಅವಕಾಶ ಮಾಡಿಕೊಟ್ಟರು. ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು  ಪ್ರತಿಭಟನೆಯಲ್ಲಿ  ಜೆಡಿಎಸ್ ಮುಖಂಡ ಬಿಳಿಚೌಡಯ್ಯ ಕಾಂಗ್ರೆಸ್ ಮುಖಂಡ ಶಶಿಧರ್, ಗಂಜಿಗೆರೆ ಚಂದ್...

Kalaam express news

ಅರಸೀಕೆರೆ :- ನಿದ್ದೆಯ ಮಂಪರಿಗೆ ಜಾರಿದ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಗಾಡಿ ಹೆದ್ದಾರಿಗೆ ಅಡ್ಡಲಾಗಿ ಮಗಚಿಕೊಂಡರು ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಅಕ್ಕಿ ತುಂಬಿಕೊಂಡು ಶಿವಮೊಗ್ಗ ದಿಂದ ಬೆಂಗಳೂರು ಕಡೆ ಸಾಗುತ್ತಿದ್ದ ಬುಲೆರೋ ಗೂಡ್ಸ್ ಗಾಡಿ ನಗರದ ಪಿಪಿ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ 206 BH ರಸ್ತೆ ವಿಭಜಕದ ಮಧ್ಯೆ ಅಳವಡಿಸಿರುವ ವಿದ್ಯುತ್ ಕಂಬಕ್ಕೆ ಗುದ್ದಿ ನೆಲಸಮಗೊಳಿಸಿ ಇರುವುದಲ್ಲದೆ ಗೂಡ್ಸ್ ಗಾಡಿ ಸಹ ಪಲ್ಟಿ ಹೊಡೆದಿದೆ. ಸದಾ ವಾಹನ ದಟ್ಟಣೆಯಿಂದ ಕೂಡಿರುವ ಹೆದ್ದಾರಿಯಲ್ಲಿ ಅನಿರೀಕ್ಷಿತವಾಗಿ ಸಂಭವಿಸಿದ ರಸ್ತೆ ಅಪಘಾತದ ವೇಳೆ ಯಾವುದೇ ವಾಹನಗಳು ಸಾಗದೆ ಇದುದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ಕೂದಲ್ಲೇ ಅಂತರದಲ್ಲಿ ತಪ್ಪಿದೆ. ಮುಂಜಾನೆ ಅನಿರೀಕ್ಷಿತವಾಗಿ ಸಂಭವಿಸಿದ ಘಟನೆ ಯಿಂದಾಗಿ ಹೆದ್ದಾರಿ ಮೂಲಕ ಬೆಂಗಳೂರು ಮೈಸೂರು ಹಾಗೂ ಹಾಸನ ಸೇರಿದಂತೆ ಇತರೆ ಊರುಗಳಿಗೆ ಸಾಗುತ್ತಿದ್ದ ಪ್ರಯಾಣಿಕರು ಕೆಲಸಮಯ ತೊಂದರೆ ಅನುಭವಿಸುವಂತಾಯಿತು ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ ಪರ್ವೀಜ್ ಅಹಮದ್ ಅರಸೀಕೆರೆ ಹಾಸನ ಜಿಲ್ಲೆ