75 ನೇಯ ಸಿದ್ದರಾಮಯ್ಯ ಅವರ ಜನ್ಮ ದಿನೋತ್ಸವ ಅಂಗವಾಗಿ ಬನಹಟ್ಟಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ತೇರದಾಳ ಮತ ಕ್ಷೇತ್ರದ ಅಭ್ಯರ್ಥಿಯಾದ ಡಾ,ಎ ಆರ್ ಬೆಳಗಲಿ ಅವರು ಭಾಗಿಯಾಗಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದಂತಹ ವರ್ಚಸ್ಸು ಹೊಂದಿರುವ ಸಿದ್ದರಾಮಯ್ಯ ಅವರ ಜನ್ಮದಿನೋತ್ಸವವನ್ನು ಕರ್ನಾಟಕದ ಎಲ್ಲಕಡೆ ಆಚರಿಸಲಾಗುತ್ತಿದೆ.
ನಮ್ಮ ತೇರದಾಳ್ ಮತಕ್ಷೇತ್ರದ ಎಲ್ಲಾ ಜನತೆಯು, ಪಕ್ಷದ ಕಾರ್ಯಕರ್ತರು,ಮುಖಂಡರು ಯುವ ಸಮೂಹವು ಕೂಡಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ 75ನೇ ಜನ್ಮ ದಿನೋತ್ಸವವನ್ನು ಒಂದು ಹಬ್ಬದ ರೀತಿಯಲ್ಲಿ ಆಚರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವೆ ಉಮಾಶ್ರೀ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ನೀಲಕಂಠ ಮುತ್ತೂರ,ಸಂಜು ಜೋತಾವರ, ಶಂಕರ ಜಾಲಿಗಿಡದ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೇ ಸವಿತಾ ಚವಲಿ ಜೊತೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
KALAAM EXPRESS NEWS
No comments:
Post a Comment