*ರಬಕವಿ ಬನಹಟ್ಟಿ*: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ , ಕರ್ನಾಟಕ ನೇಕಾರ ಸೇವಾ ಸಂಘ ಇವರ ಆಶ್ರಯದಲ್ಲಿ ಸಭೆಯನ್ನು ನಿಯೋಜನೆ ಮಾಡಲಾಗಿತ್ತು . ಕರ್ನಾಟಕ ಸರ್ಕಾರ 07-07-2024 ರಂದು ರಾಜ್ಯ ನೇಕಾರ ಒತ್ತಾಯದ ಮೇರೆಗೆ 10 ಹೆಚ್ ಪಿ ಉಚಿತ ವಿದ್ಯುತ್ ಘೋಷಣೆ ಮಾಡಿದ್ದರು ಘೋಷಣೆ ಮಾಡಿಯು ಸರ್ಕಾರ ಅನುಷ್ಠಾನ ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ , ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘವು ಸರ್ಕಾರಕ್ಕೆ ಮನವರಿಕೆ ಮಾಡುವುದು ಗೋಸ್ಕರ , ಪತ್ರ ಅಭಿಯಾನ ಚಳುವಳಿ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ತಿರ್ಕಿ ಹೇಳಿದರು . ಪ್ರತಿಯೊಬ್ಬರೂ ಪತ್ರ ಅಭಿಯಾನ ಪ್ರಾರಂಭಿಸೋಣ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನೇಕಾರರನ್ನು ಹೋರಾಟಕ್ಕೆ ಜಾಗೃತಿ ಮೂಡಿಸುವ ಕೆಲಸವನ್ನು ಪ್ರಾರಂಭ ಮಾಡಿ , ಜಿಲ್ಲಾ ಮಟ್ಟದ ಸಭೆಯನ್ನು ಮಾಡಲಾಗುವುದು ಹಾಗೂ ದಿನಾಂಕ 18-08-2023 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ ನೇಕಾರರು ಮಾನಕಾಪೂರದಲ್ಲಿ ಸಭೆ ಸೇರಿ ಚರ್ಚಲಾಗುವುದು ನಾವುಗಳು ಕೂಡಾ ಸಭೆಗೆ ಭಾಗವಹಿಸಲಿದ್ದೆವೆ ಎಂದು ಹೇಳಿದರು . ದಿ 27-08-2023 ರಂದು ರಬಕವಿ ಬನಹಟ್ಟಿಯಲ್ಲಿ ಬಾಗಲಕೋಟ ಜಿಲ್...