ಭಯೋತ್ಪಾದನೆ ಎಲ್ಲಿ ನಡೆದರೂ ಅದರ ಕಾರಣ ಏನೇ ಇದ್ದರೂ ಅದು ಅಮಾನವೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಸ್ರೇಲ್-ಫೆಲಸ್ತೀನ್ ಯುದ್ಧದ ಹಿನ್ನೆಲೆಯಲ್ಲಿ ಪ್ರಧಾನಿ ಆಡಿದ ಮಾತಿದು. ಅಮೆರಿಕ, ಇಂಗ್ಲೆಂಡ್ ಸಹಿತ ಪಾಶ್ಚಾತ್ಯ ಶಕ್ತಿಗಳು ಹಮಾಸ್ ಅನ್ನು ಟೆರರಿಸ್ಟ್ ಎಂದು ಕರೆಯುತ್ತವೆ. ಆದರೆ ವಿಶ್ವಸಂಸ್ಥೆ, ಭಾರತ ಮತ್ತು ನೆರೆಯ ಅರಬರಾಗಲಿ ಚೀನ, ರಷ್ಯವಾಗಲಿ ಹಮಾಸನ್ನು ಇನ್ನೂ ಟೆರರಿಸ್ಟ್ ಸಂಘಟನೆ ಎಂದು ಘೋಷಿಸಿಲ್ಲ. ಯಾವುದೇ ಒಂದು ಸಂಘಟನೆ ಇನ್ನೊಂದು ದೇಶದ ಗಡಿ ದಾಟಿ ನಾಗರಿಕರ ಹತ್ಯೆ ಮಾಡಿದರೆ ಅದನ್ನು ಟೆರರಿಸಂ ಎಂದು ಹೇಳಲಾಗುತ್ತದೆ. ಹೀಗಾಗಿ ಹಮಾಸ್ನ ಕೃತ್ಯವನ್ನು ಸಮರ್ಥಿಸುವಂತಿಲ್ಲ. ಈಗ ಹಮಾಸ್ ಇಸ್ರೇಲಿನೊಳಗೆ ನುಗ್ಗಿ ಯುದ್ಧ ಆರಂಭಿಸಿದೆ. 1300ಕ್ಕೂ ಹೆಚ್ಚು ಮಂದಿ ಕೊಲ್ಲಲ್ಪಟ್ಟಿದ್ದಾರೆ. ಹಮಾಸ್ನ ಆ ಕೃತ್ಯದಂತೆ ಇಸ್ರೇಲ್ ನಡೆಸಿದ ಬಾಂಬಿಂಗನ್ನು ಕೂಡ ಸಮರ್ಥಿಸುವಂತಿಲ್ಲ. ಅದು ನಾಗರಿಕರ ಮೇಲೆ, ವಿಶ್ವಸಂಸ್ಥೆಯ ಆಶ್ರಯ ಕೇಂದ್ರಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ವಿಶ್ವಸಂಸ್ಥೆಯ ಫೆಲಸ್ತೀನ್ ನಿರಾಶ್ರಿತರ ವಿಭಾಗ ತಿಳಿಸಿದೆ. ಹಾಗಾಗಿ ಇದೂ ಟೆರರಿಸ್ಟ್ ಕೃತ್ಯವೇ ಆಗಿಬಿಡುತ್ತದೆ. ಹೀಗಾಗಿಯೇ ವಿಶ್ವಸಂಸ್ಥೆಗೆ ಈ ವರೆಗೆ ಹಮಾಸ್ ಅನ್ನು ಟೆರರಿಸ್ಟ್ ಪಟ್ಟಿಗೆ ಸೇರಿಸಲು ಸಾಧ್ಯವಾಗದೇ ಹೋಗಿದೆ. ಗಾಝವನ್ನು ನಿರ್ಜನ ಮಾಡುತ್ತೇವೆ ಎಂದು ನೆತನ್ಯಾಹು ಹೇಳಿದ್ದಾರೆ. ಗಾಝವನ್ನ...