ರಬಕವಿ ಬನಹಟ್ಟಿ ಹೊಸ ವರ್ಷದ ಆಚರಣೆ ಬಂತಂದ್ರೆ ಕುಡಿದು ಕುಪ್ಪಳಿಸವುದು ಎಲ್ಲೆಡೆ ಕಾಣಸಿಗುತ್ತದೆ . ಇಲ್ಲೊಬ್ಬ ವಿಶಿಷ್ಟವಾದ ಕಲಾ ಶಿಕ್ಷಕರು ಒಬ್ಬರಿದ್ದಾರೆ , ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಸಲೀಂ ಎಂ ಡಾಂಗೆ ಇವರು ಕಲಾ ಕೃತಿಗಳನ್ನು ವಿಶಿಷ್ಟ ರೂಪದಲ್ಲಿ ರಚನೆ ಮಾಡುತ್ತಾರೆ . ಸೂಫಿ ಸಂತರು , ಬುದ್ಧ , ಬಸವ ಪುರಂದರದಾಸರು ಇನ್ನು ಅನೇಕ ಮಹಾತ್ಮರು ಸಮಾಜಕ್ಕೆ ಶಾಂತಿ ಸಂದೇಶಗಳನ್ನು ಸಾರಿದ ವಚನಗಳ ಸಾರವನ್ನು ತಮ್ಮ ವಿಭಿನ್ನ ಚಿತ್ರಕಲೆಗಳ ಮೂಲಕ ಗ್ರೀಟಿಂಗ್ಸ್ ಗಳಲ್ಲಿ ಬಿಡಿಸಿ , ಅದಕ್ಕೊಂದು ಒಳ್ಳೆಯ ಹೆಸರುವನ್ನು ಕೊಟ್ಟು ಅದನ್ನು ವರ್ಣ ರಂಜಿತ ಚಿತ್ರದಲ್ಲಿ ಮುದ್ರನ (ಪ್ರಿಂಟ್ ) ಹಾಕಿ ,ಇನ್ನೇನು ಹೊಸ ವರ್ಷ ಬರುವಷ್ಟರಲ್ಲಿಯೇ , ವಾರದ ಮುಂಚೆ , ಕೋಮುಸೌಹಾರ್ದತೆ ಯನ್ನು ಎತ್ತಿ ಹಿಡಿಯಲಿಕ್ಕೆ ,ಎಲ್ಲ ಸಮಾಜಗಳಿಗೆ ,ಶಾಂತಿ ಸಂದೇಶಗಳನ್ನು ತಮ್ಮ ವಿಭಿನ್ನ ಚಿತ್ರಕಲಾಗಳ ಮೂಲಕ ಗ್ರೀಟಿಂಗ್ಸ್ ಗಳನ್ನು ರವಾನೆಯನ್ನು ಮಾಡುವುದರ ಮೂಲಕ ಅವರು ಸತ್ - ಸಂಪ್ರದಾಯವನ್ನು ಈ ವಿಶಿಷ್ಟ ಚಿತ್ರಕಲಾ ಶಿಕ್ಷಕರು ರೂಡಿಸಿಕೊಂಡು ಬಂದಿದ್ದಾರೆ . ದಯವೇ ಧರ್ಮದ ಮೂಲವಯ್ಯ , ನಿಮ್ಮ ಏಕತೆ , ನನ್ನ ಪೂಜೆ , ನನ್ನ ಉಳಿಸಿ ಜಗತ್ತು ರಕ್ಷಿಸಿ , ಜೈ ಭಾರತ ಜನನಿಯ...