ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ಬಾಗಲಕೋಟೆ / ರಬಕವಿ - ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಕುಡಚಿ - ಜಮಖಂಡಿ ರಾಜ್ಯ ಹೆದ್ದಾರಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೆಲವು ಕಾಲ ರಸ್ತೆಯನ್ನು ತಡೆದು ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನೆ ಮಾಡಿದರು . ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂ, ಡೀಸೆಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕೈಗೊಂಡಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೇರದಾಳ್ ಮತ ಕ್ಷೇತ್ರದ ಶಾಸಕರಾದ ಸಿದ್ದು ಸವದಿ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು . ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿದ್ದು ಸೌದಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಹೇಳಿದರು . ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿದ್ದು, ಜನಸಾಮಾನ್ಯರು, ಕಾರ್ಮಿಕರು, ಬಡವರು, ರೈತರು ಮುಖ್ಯವಾಗಿ ನ...