*ಅವಳಿ ನಗರಗಳ ನೂತನ ಬಸ್ ನಿಲ್ದಾಣಗಳನ್ನು ಲೋಕಾರ್ಪನೆ ಮಾಡಿದ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ* : ಬಾಗಲಕೋಟೆ / ರಬಕವಿ ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ಅವಳಿ ನಗರಗಳು ಎಂದು ಖ್ಯಾತಿ ಪಡೆದ ರಬಕವಿ ಬನಹಟ್ಟಿ ನಗರಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಗಳನ್ನು ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ ಲೋಕಾರ್ಪಣೆ ಮಾಡಿದರು. ಈ ಅವಳಿ ನಗರಗಳ ಬಸ್ ನಿಲ್ದಾಣಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಾಗಲಕೋಟೆ ಭಾಗದ ರಬಕವಿ ಹಾಗೂ ಬನಹಟ್ಟಿ ಬಸ್ ನಿಲ್ದಾಣಗಳನ್ನು ತಲಾ 1 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ತೆರೆದಾಳ್ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ , ಈ ಅವಳಿ ನಗರಗಳನ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಗಳಿಗೆ ಕಂಪೌಂಡು ಗೋಡೆ , ಶುದ್ಧ ಕುಡಿಯುವ ನೀರು, ಸುಸಜ್ಜಿತ ಶೌಚಾಲಯ ಗಳನ್ನು ನಿರ್ಮಾಣ ಮಾಡಲಿಕ್ಕೆ ತಲಾ ನಿಲ್ದಾಣಕ್ಕೆ 75 ಲಕ್ಷ ದಂತೆ ಎರಡು ನಿಲ್ದಾಣಗಳಿಗೆ ಒಂದೂವರೆ ಒಟ್ಟು 1 ಕೋಟಿ 50 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಬೇಕು ಹಾಗೂ ನಮ್ಮ ಕ್ಷೇತ್ರದಿಂದ ಎರಡು ಪಲ್ಲಕ್ಕಿ ಬಸ್ ಗಳು ಎರಡು ಎಸಿ ಬಸ್ ಗಳು ನೀಡಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು. ...