Skip to main content

Posts

Showing posts from February, 2025

ಬೆಳಗಾವಿ ಬಸ್ ನಿರ್ವಾಹಕನ ಮೇಲೆ ಹಲ್ಲೆಯನ್ನು ಖಂಡಿಸಿ ರಬಕವಿ ಬನಹಟ್ಟಿ ನಗರದಲ್ಲಿ ಕರವೇ ಗಜಸೇನೆ ಬೃಹತ್ ಪ್ರತಿಭಟನೆ

ಬೆಳಗಾವಿ ಬಸ್ ನಿರ್ವಾಹಕನ ಮೇಲೆ ಹಲ್ಲೆಯನ್ನು ಖಂಡಿಸಿ ಕರವೇ ಗಜಸೇನೆ ಬೃಹತ್ ಪ್ರತಿಭಟನೆ  ರಬಕವಿ ಬನಹಟ್ಟಿ : 28.ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡೋದಾದ್ರೆ ನೀವ್ಯಾರು(ಎಂಇಎಸ್) ಕರ್ನಾಟಕದಲ್ಲಿ ಇರಬಾರದು. ಇವತ್ತೆ ಗಂಟು-ಮೂಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗಿ. ಎಂಇಎಸ್ ಮರಾಠಿ ಗುಂಡಾಗಳಿಗೆ ಇದು ನೇರವಾದ ಎಚ್ಚರಿಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ  ಮಾಳು ದುರ್ಗನ್ನವರ ಯುವ ಘಟಕ ಅಧ್ಯಕ್ಷರು ಉತ್ತರ ಕರ್ನಾಟಕ ರವರು ಆಕ್ರೋಶ ವ್ಯಕ್ತಪಡಿಸಿದರು.      ಮರಾಠಿ ಮತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕ ಮತ್ತು ಚಾಲಕರ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಇಂದು ಬನಹಟ್ಟಿಯಲ್ಲಿ ಮುಖ್ಯ ರಸ್ತೆ ಮೇಲೆ ರ ಬಂದ್ ಮಾಡಿ ಎಂ ಎಂ ಭದ್ರಣ್ಣವರ ಬಂಗಲೆ ಬೆಳಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನೆ ಮಾಡಿ ತಾಲೂಕಾ ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.     ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡುವುದು, ಮಸಿ ಬಳಿಯುವುದು ನಾನು ಹಲವಾರು ವರ್ಷಗಳಿಂದ ನೋಡಿದ್ದೆನೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಅದನ್ನು ಬಿಟ್ಟು ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಿದರೆ ಕರವೇ ಗಜಸೇನೆ ಸಹಿಸೊದಿಲ್ಲ ಎಂದರು.       ಮರಾಠಿಗರು ಕರ್ನಾಟಕದ ಅತಿಥಿಗಳು ಎಂಬ ಅರಿವಿನಿಂದ ಬೆಳಗಾವಿಯಲ್ಲಿ ಇರಬೇಕು....

ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು (ದಿ) ತಾಲೂಕ ಘಟಕ ರಬಕವಿ-ಬನಹಟ್ಟಿಯ ನೂತನ ಪದಾಧಿಕಾರಿಗಳ ಪದಗ್ರಹಣಹಾಗೂವಿವಿಧ ಸಂಘಟನೆಯ ಪದಾಧಿಕಾರಿಗಳ ಹಾಗೂ ಸಾಧಕರಿಗೆಸನ್ಮಾನ ಸಮಾರಂಭ :

ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು (ದಿ) ತಾಲೂಕ ಘಟಕ ರಬಕವಿ-ಬನಹಟ್ಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂವಿವಿಧ ಸಂಘಟನೆಯ ಪದಾಧಿಕಾರಿಗಳ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ :  ಬಾಗಲಕೋಟೆ /ರಬಕವಿ - ಬನಹಟ್ಟಿ  :  ಅವಳಿ ನಗರಗಳು ಜವಳಿ ನಗರಕ್ಕೆ ಪ್ರಸಿದ್ಧಿ ಪಡೆದು , ಈಗ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಚಾಪ್  ಮೂಡಿಸುತ್ತಿರುವ ಬನಹಟ್ಟಿ ನಗರದಲ್ಲಿ   ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು (ರಿ) ತಾಲೂಕ ಘಟಕ   ರಬಕವಿ-ಬನಹಟ್ಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ ,  ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳ ಮತ್ತು ವೃಂದ ಸಂಘಗಳ ಅಧ್ಯಕ್ಷರಗಳ, ಹಾಗೂ  ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು  ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಅವರಣದಲ್ಲಿ  ಸೋಮವಾರ ದಿನಾಂಕ: 10/02/2025 ರಂದು ಸಂಜೆ 5:30 ಘಂಟೆಗೆ ಹಮ್ಮಿಕೊಳ್ಳಲಾಗಿದೆ  . ಈ ಸದರಿ ಕಾರ್ಯಕ್ರಮಕ್ಕೆ ತೇರದಾಳ ಮತ ಕ್ಷೇತ್ರದ ಜನಪ್ರೀಯ ಶಾಸಕರಾದ ಮಾನ್ಯ ಶ್ರೀ ಸಿದ್ದು .ಕ.ಸವದಿ ರವರು ಬಾಗವಹಿಲಿದ್ದಾರೆ ಎಂದು ಆಯೋಜಕರು ಪ್ರಕಟಣೆ ಮೂಲಕ ಹೇಳಿದರು .