Saturday, January 29, 2022

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೇರ್ದಾಳ್ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಪರಶುರಾಮ ಮೇತ್ರಿ ಆಯ್ಕೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೇರ್ದಾಳ್ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಪರಶುರಾಮ ಮೇತ್ರಿ ಆಯ್ಕೆ

ಎಸ್‍ಡಿಪಿಐ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಇಂದು ನಡೆದ ಪಕ್ಷದ ತೇರ್ದಾಳ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ನೂತನ ವಿಧಾನಸಭಾ ಕ್ಷೇತ್ರ ಸಮಿತಿಯ ಘೋಷಣೆ ಮಾಡಿದರು. 
ಅಧ್ಯಕ್ಷರು : ಪರಶುರಾಮ್ ಮೇತ್ರಿ
ಉಪಾಧ್ಯಕ್ಷರು: ಮುಬಾರಕ್ ಎಕ್ಸಾಂಬಿ
ಕಾರ್ಯದರ್ಶಿ : ಉಮರ್ ಫಾರೂಕ್ ಖಾಲೆಖಾನ್
ಜೂತೆ ಕಾರ್ಯದರ್ಶಿ : ಯಾಸೀನ್ ಬೆಲೆಗೆರೆ
ಖಜಾಂಚಿ : ಸಿರಾಜುದ್ದೀನ್
ಸದಸ್ಯರುಗಳಾಗಿ : ಜಯರಾಮ್ ಘಶ್ತಿ, ಮಹಾಲಿಂಗಪ್ಪ ಭಜಂತ್ರಿ, ಬೀಮ್ ಶಿ ಮಾವಿನಹಿಂಡಿ, ಹುಸೇನ್ ಉಕ್ಲಿ, ರಿಯಾಝ್ ನದಾಫ್, ಭಾಷಾ ಬಿಸ್ತಿ ಆಯ್ಕೆಯಾಗಿದ್ದಾರೆ. 
ಸಮಿತಿ ಘೋಷಣೆ ಮಾಡಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ ಪಕ್ಷವು ಕಳೆದ ಹನ್ನೆರಡು ವರ್ಷಗಳಿಂದ ತಳ ಸಮುದಾಯಗಳಲ್ಲಿ ರಾಜಕೀಯ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದು ಸುಮಾರು 300 ರಷ್ಟು ಜನ ಪ್ರತಿನಿಧಿಗಳು ಚುನಾಯಿತರಾಗಿ ಜನರ ಪ್ರತಿನಿಧಿಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಸಂವಿಧಾನದ ಆಶಯಗಳನ್ನು ಅನುಷ್ಠಾನ ಮಾಡಲು ಯುವ ಜನಾಂಗ ಹೋರಾಟ ಮಾಡಬೇಕು. ರಾಜಕೀಯ ಲಾಭಕ್ಕಾಗಿ  ಜನರನ್ನು ಧರ್ಮ , ಜಾತಿ ಮತ್ತು ಭಾಷೆಯ ಹೆಸರಿನಲ್ಲಿ  ವಿಭಜಿಸುವ  ಕೆಲಸ ಜೋರಾಗಿ ನಡೆಯುತ್ತಿದೆ , ಸಂಘ ಪರಿವಾರದ ಈ ಸಮಾಜ ವಿರೋಧಿ ಸಂಚನ್ನು ಎಲ್ಲರೂ ಒಂದಾಗಿ ಸೋಲಿಸ ಬೇಕಾಗಿದೆ. ಸಂವಿಧಾನ ಸಂರಕ್ಷಣೆ ಮತ್ತು ಅದರ ಆಶಯ ಅನುಷ್ಠಾನಕ್ಕಾಗಿ ಎಸ್ ಡಿ ಪಿ ಐ ನಡೆಸುವ ಎಲ್ಲಾ ಜನಪರ ಹೋರಾಟಗಳಿಗೆ ಜನಸಾಮಾನ್ಯರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.           
ವೇದಿಕೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಸಲೀಂ ಅಹಮದ್, ಜಿಲ್ಲಾಧ್ಯಕ್ಷರಾದ ಸಲೀಂ,ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಾಥ್ ನವನಿ, ಯಮನಪ್ಪ ಗುಣದಾಳ ಮೊದಲಾದವರು ಉಪಸ್ಥಿತರಿದ್ದರು .

Wednesday, January 19, 2022

ನರಗುಂದ ನಗರದಲ್ಲಿ ಕೊಲೆಯಾದ ಸಮೀರ್ ಮುಸ್ಲಿಂ ಯುವಕನ ಬರ್ಬರ ಹತ್ಯೆ ಮಾಡಿದ 4 ಆರೋಪಿಗಳ ಬಂಧನ

ನರಗುಂದ, ಜ.19: ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನರಗುಂದ ನಿವಾಸಿ ಸಮೀರ್ ಶಹಪುರ(19) ಎಂಬ ಯುವಕನನ್ನು ಕೊಲೆಗೈದು ಇನ್ನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಬಜರಂಗ ದಳದ ಮುಖಂಡ ಸಹಿತ ನಾಲ್ವರು ಕಾರ್ಯಕರ್ತರನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಬಜರಂಗದಳದ ಮುಖಂಡನಾದ ಸುಬೇದಾರ್ ಓಣಿಯ ಗುತ್ತಿಗೆದಾರ ಸಂಜು ಮಾರುತಿ ನಲವಡಿ, ಕಾರ್ಯಕರ್ತರಾದ ನರಗುಂದ ಪಟ್ಟಣದ ಸಿದ್ದನಬಾವಿ ಓಣಿ ನಿವಾಸಿ ಮಲ್ಲಿಕಾರ್ಜುನ ಅಲಿಯಾಸ್ ಗುಂಡ್ಯ ಮುತ್ತಪ್ಪ ಹಿರೇಮಠ, ಚನ್ನಬಸಪ್ಪ ಅಲಿಯಾಸ್ ಚನ್ನಪ್ಪ ಚಂದ್ರಶೇಖರ ಅಕ್ಕಿ ಹಾಗೂ ವಾಸವಿ ಕಲ್ಯಾಣ ಮಂಟಪ ಬಳಿ ನಿವಾಸಿ ಸಕ್ರಪ್ಪ ಹನುಮಂತಪ್ಪ ಕಾಕನೂರು ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ: ನರಗುಂದದಲ್ಲಿ ಹೊಟೇಲ್ ನಡೆಸುತ್ತಿದ್ದ ಸಮೀರ್ ಶಹಪುರ ಸೋಮವಾರ ರಾತ್ರಿ ತನ್ನ ಹೊಟೇಲ್ ಬಂದ್‌ ಮಾಡಿ ಸಮೀಪದಲ್ಲೇ ಸ್ಟುಡಿಯೋ ನಡೆಸುತ್ತಿದ್ದ ಗೆಳೆಯ ಶಂಶೀರ್‌ ಎಂಬವರ ಜೊತೆ ಬೈಕ್‌ನಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದ ವೇಳೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಮಲ್ಲಿಕಾರ್ಜುನ ಮತ್ತು 10-15 ಮಂದಿಯ ತಂಡ ಇವರ ಬೈಕನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆಸಿತೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಸಮೀರ್ ಮತ್ತು ಶಂಶೀರ್ ಅವರನ್ನು ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಮೀರ್ ಮಂಗಳವಾರ ಬೆಳಗ್ಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನೆ ನಡೆದ ಕೂಡಲೇ ಗಾಯಾಳುಗಳಿಬ್ಬರನ್ನು ಸಾರ್ವಜನಿಕರು ನರಗುಂದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಮೀರ್ ಪೊಲೀಸರಿಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು ಮತ್ತು ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ*

 ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು ಮತ್ತು ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ*

ಗದಗ ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ.

ಜೀವನೋಪಾಯಕ್ಕಾಗಿ ಹೊಟೇಲ್ ನಡೆಸುತ್ತಿದ್ದ ಸಮೀರ್ ರಾತ್ರಿ ಕೆಲಸ ಮುಗಿಸಿ ತನ್ನ ಸ್ನೇಹಿತ ಸಂಶೀರ್ ನೊಂದಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಂಘಪರಿವಾರದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಗಂಭೀರ ದಾಳಿಯಿಂದಾಗಿ ಸಮೀರ್ ಮೃತಪಟ್ಟರೆ, ಆತನ ಸ್ನೇಹಿತ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೆಲ ದಿನಗಳ ಹಿಂದೆ ಆರೆಸ್ಸೆಸ್ ಕಾರ್ಯಕರ್ತರು ದುರುದ್ದೇಶಪೂರ್ವಕವಾಗಿ ಮುಸ್ಲಿಮ್ ಯುವಕನಿಗೆ ತಮ್ಮ ವಾಹನ ಢಿಕ್ಕಿ ಹೊಡೆಸಿದ ಬಳಿಕ ಸ್ಥಳದಲ್ಲಿ ಸಣ್ಣ ಮಟ್ಟದ ವಾಗ್ವಾದ ನಡೆದಿತ್ತು. ಆ ನಂತರ ಸಂಘಪರಿವಾರದ 40 ಮಂದಿ ದುಷ್ಕರ್ಮಿಗಳು ಗುಂಪುಕಟ್ಟಿಕೊಂಡು ಬಂದು ಮುಸ್ಲಿಮ್ ಮೊಹಲ್ಲಾಗೆ ನುಗ್ಗಿ ಬೆದರಿಕೆಯೊಡ್ಡಿದ್ದರು. ಈ ವೇಳೆ ಎರಡೂ ಗುಂಪುಗಳ ಮಧ್ಯೆ ಘರ್ಷಣೆಯೂ ನಡೆದಿತ್ತು. ಅದಾದ ನಂತರ ಸಂಘಪರಿವಾರವು ನಗರದಲ್ಲಿ ಸುಮಾರು 2 ಕಿ.ಮೀ. ವರೆಗೂ ಬೃಹತ್ ರಾಲಿ ನಡೆಸಿದ್ದು, ಇದರಲ್ಲಿ ರಸ್ತೆಯುದ್ದಕ್ಕೂ ದ್ವೇಷ ಹರಡುವ ಹಾಗೂ ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗಲಾಯಿತು. ನಂತರ ಪೊಲೀಸ್ ಠಾಣೆಯ ಆವರಣದಲ್ಲಿ ಜಮಾಯಿಸಿಕೊಂಡು ಸಂಘಪರಿವಾರದ ನಾಯಕರು ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದರು. ನರಗುಂದದಲ್ಲಿ ಕೋಮು ದ್ವೇಷ ಹರಡಲು ಮತ್ತು ಸೌಹಾರ್ದ ಕೆಡಿಸಲು ಸಂಘಪರಿವಾರವು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿದೆ. ಮೌಲಾನಾ ಆಝಾದ್ ಉರ್ದು ಶಾಲೆಗೆ ಅಕ್ರಮವಾಗಿ ಪ್ರವೇಶಿಸಿ ಮುಸ್ಲಿಮ್ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡಿದ್ದು ಇತ್ತೀಚಿನ ತಾಜಾ ಉದಾಹರಣೆಯಾಗಿದೆ.

ಸಂಘಪರಿವಾರದ ನಾಯಕರ ದ್ವೇಷ ತುಂಬಿದ ಭಾಷಣದಿಂದ ಪ್ರಚೋದಿತರಾಗಿಯೇ ದುಷ್ಕರ್ಮಿಗಳು ಮುಸ್ಲಿಮ್ ಯುವಕರ ಮೇಲೆ ಬರ್ಬರ ದಾಳಿ ನಡೆಸಲಾಗಿರುವುದು ಸ್ಪಷ್ಟವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಂತಕರನ್ನು ಕೂಡಲೇ ಬಂಧಿಸುವುದರ ಜೊತೆಗೆ ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ಮೇಲೆಯೂ ಕಠಿಣ ಕ್ರಮ ಕೈಗೊಳ್ಳಬೇಕು. ಈ ಪ್ರದೇಶದಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸಿಕೊಂಡು ಸಂಘೀ ಗೂಂಡಾಗಳು ನಡೆಸುತ್ತಿರುವ ದುಷ್ಕರ್ಮಗಳಿಗೆ ಕಡಿವಾಣ ಹಾಕಬೇಕು. ದಾಳಿಗೊಳಗಾದ ಇಬ್ಬರು ಯುವಕರ ಸಂತ್ರಸ್ತ ಕುಟುಂಬಕ್ಕೂ ಸರಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ನಾಸಿರ್ ಪಾಶ ಒತ್ತಾಯಿಸಿದ್ದಾರೆ.

Sunday, January 16, 2022

KALAAM EXPRESS NEWS ಅಂಜುಮನ್ ಎ ಇಸ್ಲಾಂ ಸಂಸ್ಥೆ ಬನಹಟ್ಟಿ ಇವರಿಂದ Waqf ಬೋರ್ಡ್ ಬಾಗಲಕೋಟ ಇಂಚಾರ್ಜ್ ಆಫೀಸರ್ ರಹಮತುಲ್ಲ ಪೆಂಡಾರಿ ಅವರಿಗೆ ಸನ್ಮಾನ :

Waqf ಬೋರ್ಡ್ ಬಾಗಲಕೋಟ್ ಇಂಚಾರ್ಜ್ ಆಫೀಸರ್ ರೆಹಮತ್ತುಲ್ಲಾ ಪೆಂಡಾರಿ ಇವರಿಗೆ
ಅಂಜುಮನ್ ಎ ಇಸ್ಲಾಂ ಸಂಸ್ಥೆ ಯಿಂದ ಸನ್ಮಾನ ಮಾಡಿದರು .ತಮ್ಮ ಸ್ವ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ವೋಟ್ನಲ್ಲಿ ಸೇವೆ ಸಲ್ಲಿಸಿದರು ಸಾಕಷ್ಟು ಬಾಗಲಕೋಟ ಜಿಲ್ಲೆಯಲ್ಲಿ ಅವರು ಅಂಜುಮನ್ ಮಸೀದಿ , ದರ್ಗಾ , ಕಬ್ರಸ್ತನ್  , ಇನ್ನಿತರ ಕೆಲಸಗಳಿಗೆ ಸರ್ಕಾರದಿಂದ ಬಂದಂತಹ ಅನುದಾನ ಬಿಡುಗಡೆ ಮಾಡಿ ಜಿಲ್ಲೆಯ ಜನರಿಗೆ ಅನುಕೂಲಕರ ಸೇವೆ ಮಾಡಿದವರು .

ರಹಮತ್ತುಲ್ಲಾ  ಪೆಂಡಾರಿ  ಅವರು ಬಾಗಲಕೋಟ್ ಜಿಲ್ಲೆಯಿಂದ ಬಡ್ತಿ ಪಡೆದು ಕೊಪ್ಪಳ ಜಿಲ್ಲೆಗೆ ವರ್ಗಾವಣೆಯಾಗಿದೆ ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಚಾರ್ಜ್ ಆಫೀಸರ್ ರಹ್ಮತುಲ್ಲಾ ಪೆಂಡಾರಿ  ಬಾಗಲಕೋಟ ಜಿಲ್ಲೆಯಾದ್ಯಂತ ಎಲ್ಲ ಅಧ್ಯಕ್ಷರು ಸದಸ್ಯರು ಎಲ್ಲರಿಂದ ಸೇವೆಗಳಿಗೆ ಸಹಕಾರದಿಂದ ನೋಡಿಕೊಂಡಿದ್ದಾರೆ ಮತ್ತು ಸರ್ಕಾರಿ ಸೇವೆ ಮಾಡಿದವರಿಗೆ ಇಷ್ಟೊಂದು ಗೌರವ ನನಗೆ ,  ನಾನು ನಿಮ್ಮೆಲ್ಲರ ಅಪಾರ ಕೃತಜ್ಞನಾಗಿರುತ್ತೇನೆ  ಎಂದು ಹೇಳಿದರು .

  1. ಇದೇ ಸಂದರ್ಭದಲ್ಲಿ ಮಾತನಾಡಿದ ಅಂಜುಮನ್ ಬನಹಟ್ಟಿ ಸಂಸ್ಥೆಯ ಅಧ್ಯಕ್ಷರಾದ ಅರುಣ್ ರಶೀದ್ ಸಾಂಗ್ಲಿಕರ್ ಅವರು ಅಂಜುಮನ್ ಸಂಸ್ಥೆಯ ಆಡಳಿತ ಮಂಡಳಿ ಬನಹಟ್ಟಿ ಯಾವಾಗ ಪುನರ್  ರಚನೆಯಾಯಿತು ಆವಾಗಿನಿಂದ ನಮ್ಮ ಬನಹಟ್ಟಿ ಅಂಜುಮನ್ ಸಂಸ್ಥೆಗೆ ಸಾಕಷ್ಟು ಸರಕಾರದಿಂದ ಅನುದಾನ ಕೊಡುವವಲ್ಲಿ ಸಹಾಯ ಪ್ರೋತ್ಸಾಹ ಸಂಸ್ಥೆಗೆ ನೀಡಿದ್ದಾರೆ. .ಮತ್ತು ಕಬ್ರಸ್ತನ್ ಕಂಪೌಂಡ್ ಗೋಡೆ ನಿರ್ಮಿಸಲಿಕೆ 7.5 ಲಕ್ಷ ರೂಪಾಯಿಗಳು ಅನುದಾನ ಕೊಟ್ಟು ಬಹಳ ಒಳ್ಳೆಯ ರೀತಿಯಲ್ಲಿ ಸಂಸ್ಥೆಗೆ ಸಮಾಜಕ್ಕೆ ಸಹಕಾರ ನೀಡಿದ್ದಾರೆ . ಇದಲ್ಲದೆ ಮೈನಾರಿಟಿ ಫಂಡಿನಿಂದ 10 ಲಕ್ಷ ರೂಪಾಯಿ ಸ್ಕೂಲ್ ಮಕ್ಕಳ ಮತ್ತು ನಮ್ಮ ಮಕ್ತಬ್ ಕಟ್ಟಡ ಕಟ್ಟಲಿಕ್ಕೆ ಸಾಕಷ್ಟು ಅನುದಾನ ಕೊಟ್ಟು ಸಹಕಾರ ನೀಡಿದ್ದಾರೆ .ಒಂದು ರೀತಿಯ ಸಹಕಾರ ಖುಷಿ ಖುಷಿ  , ಇನ್ನೊಂದು ರೀತಿಯ ನಮಗೆ ಬಹಳಷ್ಟು ದುಃಖ ಆಗ್ತಾ ಇದೆ . ಏಕೆಂದರೆ ಇಂತಹ ಸರಕಾರಿ ಆಫೀಸರ್ ಗಳು ಸಾಮಾಜಿಕ ಕೆಲಸ ತಮ್ಮ ಕೆಲಸ ಅನ್ನುವವರು , ಇವತ್ತು ನೆರೆಯ ಕೊಪ್ಪಳ ಜಿಲ್ಲೆಗೆ ವರ್ಗಾವಣೆಯಾಗುತ್ತಿದೆ .ಇದು ದುಃಖದ ಸಂಗತಿ ಕೂಡ ಇನ್ನೊಂದು ಇನ್ನೊಂದು ಖುಷಿ , ಭಡ್ತಿಯಾಗಿ ಪರ್ಮೋಷನ್ ಭಡ್ತಿಯಾಗಿ ಕೊಪ್ಪಳ ಜಿಲ್ಲೆಗೆ ಹೋಗ್ತಾ ಇದ್ದಾರೆ .ಇವರ ಸಹಕಾರ ಪ್ರೋತ್ಸಾಹ ಮರೆಯುವಂತಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು .ಇದೇ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆಯ ಸೆಕ್ರೆಟರಿ ಮೌಲಾಸಾಬ್ ಜಮಾದಾರ್ , ಸಂಸ್ಥೆಯ ಉಪಾಧ್ಯಕ್ಷರಾದ ನೂರ್ ಸಾಬ್ ಮೋಮಿನ್ ,ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ,ಟಿಪ್ಪುಸುಲ್ತಾನ ಅಲ್ಮೆಲ್ ,ಬುಡನ್ ಜಮಾದಾರ ರಸೂಲ್ gurlಹೊಸೂರ್ ಫಿರೋಜ್  ಜಕಾತಿ ಅಜೀಮ್ ಶೇಕ್  ಮುರಾದ್ ಮೋಮಿನ್ ಮಲಿಕ್ ಬಾರಿಗಡ್ಡಿ ಅಯ್ಯೂಬ್ ಹೊರಟ್ಟಿ , ರಾಜು ಕುಳ್ಳೊಳ್ಳಿ ಅಲ್ತಾಫ್ ಮುಜಾವರ ಅಬೂಬಕ್ಕರ್ ಮೋಮಿನ್ ಮತ್ತು ನಮ್ಮ ನಾಡಿನ ಹೆಮ್ಮೆಯ ಪುತ್ರ ಸಲೀಂ ಶೇಕ್ , ಮುಂತಾದವರು ಉಪಸ್ಥಿತರಿದ್ದರು .

KALAAM EXPRESS NEWS

Rabkavi Banhatti

Saturday, January 15, 2022

KALAAM EXPRESS NEWS weekend curfew

ರಬಕವಿ ಬನಹಟ್ಟಿ ಅವಳಿ ನಗರಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಎರಡನೇ ವಾರ ಸಂಪೂರ್ಣ ವ್ಯಾಪಾರ ವಹಿವಾಟು ಸ್ಥಗಿತ , ಬಸ್-ಲಾರಿ ಆಟೋ  ಎಂದಿನಂತೆ ಸಂಚಾರ .

   ರಬಕವಿ ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಅವಳಿ ನಗರಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ವೀಕೆಂಡ್ ಕರ್ಫ್ಯೂ ಪೊಲೀಸ್ ಇಲಾಖೆಯವರು ಸರ್ಕಾರ ಹೊರಡಿಸಿರುವ ಆದೇಶವನ್ನು ಪಾಲನೆ ಮಾಡಿಸುವವಲ್ಲಿ   ಸಂಪೂರ್ಣ ಯಶಸ್ವಿಯಾಗಿದ್ದಾರೆ .ರಬಕವಿ ಬನಹಟ್ಟಿ ರಾಂಪುರ ಹೊಸೂರ ಸಾರ್ವಜನಿಕರು ತಮ್ಮ ತಮ್ಮ  ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ತಮ್ಮ ಮನೆಯಲ್ಲಿ ಸರ್ಕಾರ ಆದೇಶ ಹೊರಡಿಸಿರುವ ವೀಕೆಂಡ್ ಕರ್ಫ್ಯೂ ಆದೇಶ ಪಾಲನೆ ಮಾಡಿದ್ದಾರೆ .
   ಪೊಲೀಸ್ ಇಲಾಖೆಯವರು ವ್ಯಾಪಾರ ವಹಿವಾಟುಗಳು ಬಂದ್ ಮಾಡಿಸಿ ಜನಸಂಚಾರ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನ ಸಮೂಹ ಕೊಡದಂತೆ ಎಚ್ಚರಿಕೆ ವಹಿಸಿದ್ದರು .
KALAAM EXPRESS NEWS
 R BANHATTI

Tuesday, January 11, 2022

ಉತ್ತರ ಪ್ರದೇಶದ ಚುನಾವಣೆ ಸುದ್ದಿ ಕಲಾಂ ಎಕ್ಸ ಪ್ರೆಸ್ ನ್ಯೂಸ್ ನಲ್ಲಿ

ಉತ್ತರ ಪ್ರದೇಶ..

UPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌
ಕಾರ್ಮಿಕ ಸಚಿವ ರಾಜೀನಾಮೆ ಕೊಟ್ಟ ಬಳಿಕ ಈ ಹೇಳಿಕೆ ನೀಡಲಾಗಿದ್ದು, ಇದರ ಬೆನ್ನಲ್ಲೇ ಮೂವರು ಬಿಜೆಪಿ ಶಾಸಕರು ಪಕ್ಷ ತೊರೆದಿದ್ದಾರೆ

 ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಕ್ಯಾಬಿನೆಟ್ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರಿದ ನಂತರ ಶರದ್‌ ಪವಾರ್‌ ಅವರ ಈ ಹೇಳಿಕೆ ಹೊರಬಿದ್ದಿದೆ.

ಯುಪಿ ಬಿಜೆಪಿಗೆ ಬಿಗ್‌ ಶಾಕ್‌:
ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ಅವರ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಇತರ ಮೂವರು ಬಿಜೆಪಿ ಶಾಸಕರು ಮಂಗಳವಾರ ಪಕ್ಷ ತೊರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಕ್ಷ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಉತ್ತರ ಪ್ರದೇಶದ ಜನರು ಬದಲಾವಣೆಗಾಗಿ ಎದುರು ನೋಡುತ್ತಿದ್ದಾರೆ, ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ, ವಿಧಾನಸಭೆ ಚುನಾವಣೆಗೂ ಮುನ್ನ ಉತ್ತರ ಪ್ರದೇಶದಲ್ಲಿ ಕೋಮು ಧ್ರುವೀಕರಣ ಮಾಡಲಾಗುತ್ತಿದೆ, ಇದಕ್ಕೆ ಉತ್ತರ ಪ್ರದೇಶದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್, ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷವು ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ತೊರೆದ ಉತ್ತರ ಪ್ರದೇಶದ ಶಾಸಕರು

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಿಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

ಅವರ ನಂತರ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಪಕ್ಷವನ್ನು ತೊರೆದಿದ್ದಾರೆ. ಇದರಲ್ಲಿ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ.

ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ ರೋಷನ್ ಲಾಲ್ ವರ್ಮಾ ಕೂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷ ಸೇರಲು ನಿರ್ಧರಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಹಾಸನ್ ಜಿಲ್ಲಾಸುದ್ದಿ ಕಲಾಂ ಎಕ್ಸ ಪ್ರೆಸ್ ನಲ್ಲಿ


ಅರಸೀಕೆರೆ : ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ನಿಧನರಾಗಿರುವುದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಹೇಮಂತ್‌ ಕುಮಾರ್‌ ಹೇಳಿದರು . 

ನಗರದ ಪಿ.ಪಿ. ವೃತ್ತದಲ್ಲಿ ಕರವೇ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು , ಕನ್ನಡ ಸಾಹಿತ್ಯ ಪರಿಷತ್ತ್ ಕನ್ನಡ ಅಭಿವೃದ್ಧಿ ಪ್ರಾದ್ದಿಕಾರ ಅಧ್ಯಕ್ಷರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಕನ್ನಡ ಕಟ್ಟು ಕೆಲಸಗಳನ್ನು ಮಾಡಿದ್ದರು . ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು .ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಸಕ್ರೀಯ ಸದಸ್ಯರಾಗಿ ಕರವೇ ಹಿತೈಷಿಗಳಾಗಿದರು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿ ಗೌರವಗಳು ಹಲವಾರು ಇವರ ಅಗಲಿಕೆ ಈ ನಾಡಿಗೆ ತುಂಬಲಗದ ನಷ್ಟವಾಗಿದೆ ಎಂದರು

ನಗರಾಧ್ಯಕ್ಷ ಕಿರಣ್‌ಕುಮಾರ್‌ ಮಾತನಾಡಿ , ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವ ಮೂಲಕ ಕನ್ನಡ ವಿಮರ್ಶಾ ಕ್ಷೇತ್ರ , ನಾಟಕ ರಚನೆಯಲ್ಲಿ ಪ್ರಸಿದ್ಧರಾಗಿದ್ದರು ಚಂದ್ರಶೇಖರ ಪಾಟೀಲ್‌ರವರು , ಅವರು ರಚಿಸಿದ ನಾಟಕಗಳು ದೇಶ ಸೇರಿದಂತೆ ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ . ಸುದೀರ್ಘ ಅವಧಿ ಸಂಕ್ರಮಣ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ ಎಂದರು . ಜಿಲ್ಲಾ ಉಪಾಧ್ಯಕ್ಷ ತುಳಸಿದಾಸ್ , ಕಾರ್ಯದರ್ಶಿ ರವಿಶಂಕರ್ , ಚಂದ್ರಶೇಖರ್ ಯಾದವ್ , ರೋಷನ್ , ಸಂತೋಷ್ , ಮೊಹಿದ್ದೀನ್‌ಪಾಷ , ಮಲ್ಲಿಕ್ , ರಕ್ಷಿತ್ , ಅರುಣ್ , ಪ್ರಸನ್ನ , ಕೋಡಿಹಳ್ಳಿ ಲೋಕೇಶ್ ಉಪಸ್ಥಿತರಿದ್ದರು .


Kalaam Express news

ವರದಿ : 
ಪರ್ವೀಜ್ ಅಹಮದ್
ಅರಸೀಕೆರೆ
ಹಾಸನ ಜಿಲ್ಲೆ